ಉಡುಪಿ, ಸೆಪ್ಟಂಬರ್ 11 : ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ , ಸೆಪ್ಟಂಬರ್ 12 ರಿಂದ 14 ರ ವರೆಗೆ ಬೆಳಗ್ಗೆ 10 ರಿಂದ ರಾತ್ರಿ 8 ರ ವರೆಗೆ ತಂತ್ರಾAಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗಧಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್,ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.