ಮೈಸೂರಿನ ಚಿತ್ರಮಂದಿರದಲ್ಲಿ’ಅನ್ನ’ ಸಿನಿಮಾ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ.!

ಮೈಸೂರು : ಮೈಸೂರಿನ ಡಿ.ಆರ್.ಸಿ ಚಿತ್ರಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ‘ಅನ್ನ’ ಸಿನಿಮಾ ವೀಕ್ಷಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ನಿನ್ನೆ ಮೈಸೂರಿನ ಡಿ.ಆರ್.ಸಿ ಚಿತ್ರಮಂದಿರದಲ್ಲಿ ‘ಅನ್ನ’ ಸಿನಿಮಾ ವೀಕ್ಷಿಸಿದೆ. ಅನ್ನ ಉಣ್ಣಲು ನನ್ನೂರಿನ ಜನ ಹಬ್ಬಕ್ಕಾಗಿ ಕಾಯುತ್ತಿದ್ದ ನನ್ನ ಬಾಲ್ಯದ ದಿನಗಳು ಈ ನಿನಿಮಾದ ಕಥೆಯ ಮೂಲಕ ಕಣ್ಣೆದುರು ಬಂದವು.

ನಾನು ಕಂಡ ಹಸಿವು, ಬಡತನಗಳು ನಾಡಿನ ಯಾರೊಬ್ಬರನ್ನೂ ಬಾಧಿಸದಿರಲಿ ಎಂದು 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಕೊಟ್ಟಿದ್ದೆ, ಚಿತ್ರದ ಕೊನೆಯಲ್ಲಿ ಈ ಯೋಜನೆಯ ಮಹತ್ವದ ಬಗ್ಗೆಯೂ ಸಿನೆಮಾ ಬೆಳಕು ಚೆಲ್ಲಿದೆ.

ಮನೋರಂಜನೆಯ ಜೊತೆಗೆ ಹಸಿವಿನ ಎದುರು ಬೇರೆಲ್ಲಾ ಸಂಬಂಧಗಳು ಹೇಗೆ ನಗಣ್ಯವೆನಿಸುತ್ತವೆ ಎಂಬ ಸಂದೇಶವನ್ನು ಒಳಗೊಂಡ ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Latest Indian news

Popular Stories