ಹಾಸನದಲ್ಲಿ ಘೋರ ದುರಂತ:ಮಣ್ಣು ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ

ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು, ಮಣ್ಣು ಕುಸಿದುಮಣ್ಣಿನಡಿ ಸಿಲುಕಿ ಓರ್ವ ಮೃತಪಟ್ಟು ಇಬ್ಬರಿಗೆ ಗಾಯಗಳಾಗಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಹನಿಕೆ ಗ್ರಾಮದ ಕೆರೆ ಕೋಡಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ದರ್ಶನ್ ಕುಮಾರ್ (29) ಎಂದು ಗುರುತಿಸಲಾಗಿದೆ.

ವಸಂತ್ ಕುಮಾರ್, ಲೋಕಪ್ಪ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Latest Indian news

Popular Stories