ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ.
ಈ ಪ್ರಕರಣದಲ್ಲಿ 2023 ಜೂನ್ 13ರಂದು ಆರೋಪಿತ ಕಿರಣ್ ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿ ಯನ್ನು “ ಪ್ರೀತಿ ಮಾಡುತ್ತಿದ್ದು, ಮದುವೆಯಾಗುತ್ತೇನೆ” ಎಂದು ನಂಬಿಸಿ ಮಂಗಳೂರು ತಾಲೂಕು ಬಜಪೆಯ ಮೂಡುಪೆರಾರ ಗ್ರಾಮದ ಅರ್ಕೆಪದವು ಎಂಬಲ್ಲಿರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವುದಾಗಿ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆದರೆ ಆರೋಪಿಯ ಮೇಲಿನ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ
ದ.ಕ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಧೀಶರಾದ ಮನು ಕೆ.ರವರು ಆರೋಪಿಯನ್ನು ಕೇಸಿನಿಂದ ಮುಕ್ತಗೊಳಿಸಿ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.