ಕಡಬ: ಬೈಕ್‌ಗೆ ಕಾರು ಢಿಕ್ಕಿಯಾಗಿ ಉದ್ಯಮಿ ಮೃತ್ಯು

ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಉದ್ಯಮಿ ಮೃತಪಟ್ಟ ಘಟನೆ ಕಡಬದ ಹಳೆಸ್ಟೇಷನ್ ಬಳಿ ನಡೆದಿದೆ.ಉದ್ಯಮಿ ಹಸೈನಾರ್(57) ಎಂಬವರು ಘಟನೆಯಲ್ಲಿ ಮೃತಪಟ್ಟರು.

ಅಪಘಾತ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದ್ದು, ಸಿನಿಮೀಯ ರೀತಿಯಲ್ಲಿ ಬೈಕ್‌ಗೆ ಕಾರು ಢಿಕ್ಕಿ ಹೊಡೆದಿದೆ.
ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ಮೃತಪಟ್ಟಿದ್ದು, ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories