ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಮೃತ್ಯು, ಇನ್ನೂ 13 ಮಂದಿ ಸಿಲುಕಿರುವ ಶಂಕೆ!

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸುತ್ತಿವೆ. ಹೆಣ್ಣೂರಿನ ಬಾಬುಸಾಬ್‌ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಘಟನೆ ನಡೆದಿದೆ.

ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.

 

ಕಾರ್ಯಾಚರಣೆ ವೇಳೆ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಅಲ್ಲದೆ ಸಿಬ್ಬಂದಿ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

 

Latest Indian news

Popular Stories