ಉಡುಪಿ: ರೈಲು ಭೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಮೃ*ತ್ಯು


ಉಡುಪಿ, ಅ.25; ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಿಲುಗಡೆ ಪಡೆದ ರೈಲಿನ ಭೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ, ಜಿಲ್ಲಾಸ್ಪತ್ರೆಗೆ ಸಾಗಿಸಿದ ಬಳಿಕ, ಸಾವನ್ನಪ್ಪಿರುವುದು ವೈದ್ಯರ ಪರೀಕ್ಷೆಯಿಂದ ಧೃಡಪಟ್ಟಿದೆ. ಈ ಘಟನೆಯು ಇಂದು ಶುಕ್ರವಾರ ನಡೆದಿದೆ. ಮೃತ ದೇಹವನ್ನು ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಕೇಂದ್ರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

 ಬೆಂಗಳೂರಿನಿಂದ ಕಾರವಾರ ತೆರಳುವ ರೈಲು ಫ್ಲಾಟ್ ಫಾರ್ಮ್ ಸಂಖ್ಯೆ ಒಂದರಲ್ಲಿ ನಿಲುಗಡೆ ಪಡೆದಿತ್ತು. ಸ್ಥಳ ಸಂಖ್ಯೆ 23 ರಲ್ಲಿದ್ದ ಭೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಡಾ. ಸ್ಟಿವನ್ ಜಾರ್ಜ್ ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರ ನೆರವು ಪಡೆದಿದ್ದರು. ರೈಲ್ವೆ ಇನ್ಸ್ಪೆಕ್ಟರ್ ಮಧುಸೂಧನ್ ಸಮಕ್ಷಮದಲ್ಲಿ ಒಳಕಾಡುವರು, ಯೋಗಿಶ್, ಗಣೇಶ್, ಮಂಜುನಾಥ, ಶ್ರೀಲತಾ ಅವರ ಸಹಕಾರದಿಂದ ಭೋಗಿಯೊಳಗಿನಿಂದ ವ್ಯಕ್ತಿಯನ್ನು ಹೊರ ತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದು ಧೃಡಿಕರಿಸಿದರು. ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ಸಾವಿಗೆ ಕಾರಣ ತಿಳಿದುಬಂದಿಲ್ಲ. ವೈದ್ಯಕೀಯ ಮರಣೋತ್ತರ ಪರೀಕ್ಷೆಯಿಂದ ಇನ್ನಷ್ಟೆ ತಿಳಿಯಬೇಕಾಗಿದೆ.

Latest Indian news

Popular Stories