ಕೋಲಾರದಲ್ಲಿ ಭೀಕರ ರಸ್ತೆ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ 

ಕೋಲಾರ: ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ದಂಪತಿ ಮೃತಪಟ್ಟು, 15 ಕ್ಕೂ ಹೆಚ್ಚು‌ ಪ್ರಯಾಣಿಕರು ಗಾಯಗೊಂಡ‌ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ.

ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75 ರ ವಿರುಪಾಕ್ಷಿ ಗೇಟ್ ಬಳಿ ಈ ಘಟನೆ‌ ನಡೆದಿದ್ದು,ಬಸ್‌ ಪಲ್ಟಿಯಲ್ಲಿ ವಿಜಯವಾಡದ ದಂಪತಿಗಳು ಮೃತಪಟ್ಟಿದ್ದಾರೆ.

ಮೃತರನ್ನು ವಿಜಯವಾಡ ಮೂಲದ ಷರೀಫ್ ಹಾಗೂ ಮೈಮುನ್ನಿಸಾ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಆಂಧ್ರದ ವಿಜಯವಾಡದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ಆಂಧ್ರದ ನಲ್ಲೂರಿನ ವೇಮೂರಿ-ಕಾವೇರಿ ಟ್ರಾವಲ್ಸ್ ಗೆ ಸೇರಿದ್ದಾಗಿದೆ. ಚಾಲಕನ‌ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಬಸ್ ಪಲ್ಟಿಯಾದ ತಕ್ಷಣ ಬಸ್ ನ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ. ಇನ್ನು ಬಸ್ ನಲ್ಲಿ‌ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ಮುಳಬಾಗಲು ಸರ್ಕಾರಿ‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ‌ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Latest Indian news

Popular Stories