ಆಂಧ್ರಪ್ರದೇಶದಲ್ಲಿ ಮೀನಿನ ಕಂಟೇನರ್- ಲಾರಿ ಅಪಘಾತ – ಉಚ್ಚಿಲದ ವ್ಯಕ್ತಿ ಗಂಭೀರ

ಪಡುಬಿದ್ರಿ: ಮೀನಿನ ಕಂಟೇನರ್ ಮತ್ತು ಲಾರಿಯ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್ ಬಳಿ ನಡೆದಿದೆ.

ಗಾಯಾಳುವನ್ನು ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂದು
ಗುರುತಿಸಲಾಗಿದೆ. ಸರಕು ಲಾರಿಯ ಚಾಲಕ ಸ್ಥಳದಲ್ಲೇ
ಮೃತಪಟ್ಟಿದ್ದು, ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ
ತಿಳಿಯಬೇಕಿದೆ.

ಆಂಧ್ರಪ್ರದೇಶ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಬಶೀರ್‌ನ ಸಂಬಂಧಿಕರು ಉಚ್ಚಿಲ ಬಡಾ ಗ್ರಾಮದಿಂದ ಆಂಧ್ರಪ್ರದೇಶಕ್ಕೆ ತೆರಳಿದ್ದಾರೆ.

Latest Indian news

Popular Stories