ಕೊಡಗು: ಎರಡು ಮೂರು ದಿನ ಕೊಂಚ ಬಿಡುವು ನೀಡಿದ್ದ ಮಳೆ ನಿನ್ನೆಯಿಂದ ಮತ್ತೆ ಬಿರುಸಿನ ಗಾಳಿಯೊಂದಿಗೆ ಬೀಳುತ್ತಿದೆ. ಹವಾಮಾನ ಇಲಾಖೆ ನಾಳೆಗೆ ಅರೆಂಜ್ ಅಲರ್ಟ್ ಘೋಷಿಸಿದೆ.
ಪೊನ್ನಂಪೇಟೆಯಲ್ಲಿ ಮರ ಮನೆ ಮೇಲ್ಚಾವಣಿ ಮೇಲೆ ಬಿದ್ದು ಹಾನಿಯಾಗಿದೆ. ಪೊನ್ನಂಪೇಟೆಯ ಕುಂದರಸ್ತೆಯ ಕಾವೇರಿ ನಗರದ ನಿವಾಸಿ ಎಸ್. ಕೆ. ಸುರೇಶ್ ಎಂಬುವರ ಮನೆಯ ಹಿಂಭಾಗದಲ್ಲಿ ಇದ್ದ ಬಾರಿ ಗಾತ್ರದ ಮರ ಒಂದು ಇಂದು ಬೆಳಗಿನ ಜಾವ 5 ಗಂಟೆಗೆ ಮನೆಯ ಕಬ್ಬಿಣದ ಮೇಲ್ಚಾವಣಿಯ ಮೇಲೆ ಬಿದ್ದು ಮನೆಗೆ ಹಾನಿ ಸಂಭವಿಸಿದೆ.
ಘಟನೆಯಿಂದ ಯಾವುದೇ ರೀತಿಯ ಪ್ರಾಣ ಹಾನಿ ಆಗಿರುವುದಿಲ್ಲ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇದೀಗ ಮೌಕಿಕವಾಗಿ ದೂರು ನೀಡಲಾಗಿದೆ .