ಮುಖಾಮುಖಿ ಬಸ್ ಡಿಕ್ಕಿ: ಮಹಿಳೆಯರಿಬ್ಬರ ಸಾವು, ಹತ್ತಕ್ಕು ಅಧಿಕ ಜನರಿಗೆ ಗಾಯ

ವಿಜಯಪುರ: ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆಯರಿಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಗ್ರಾಮದ ಬಳಿ ನಡೆದಿದೆ.

ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್‌ಗಳ ನಡುವೆ ಭೀಕರ ಅಪಘಾತವಾಗಿದ್ದು. ಅಪಘಾತದಲ್ಲಿ ವಿಜಯಪುರ ಜಿಲ್ಲೆ ಬಸನವಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ ಮಕಾನದಾರ್ (೩೬) ಮತ್ತು ಕಲಬುರಗಿ ಜಿಲ್ಲೆಯ ನಿವಾಸಿ ರೋಹಿಣಿ ಪಂಚಾಳ (31) ಸಾವನ್ನಪ್ಪಿದ್ದಾರೆ. ಇನ್ನು ಎರಡೂ ಬಸ್ ಚಾಲಕರು ಸೇರಿದಂತೆ ಹತ್ತಕ್ಕೂ‌ ಅಧಿಕ ಜನರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ವಿಜಯಪಯರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಎರಡು ಬಸ್‌ಗಳು ಸಂಪೂರ್ಣ ಜಖಂಗೊಂಡಿವೆ.

ಅಪಘಾತದ ಕಾರಣ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಪೂರ್ಣ ಸಂಚಾರ ಬಂದ್ ಆಗಿದ್ದು, ಎರಡು ಬದಿಗೆ ಎರಡು ಮೂರು ಕಿಲೋಮೀಟರ್ ವರೆಗೂ ವಾಹನಗಳು ಸಾಲಗಟ್ಟಿ ನಿಂತಿವೆ.
ಸುಗಮ ಸಂಚಾರಕ್ಕೆ ಪೊಲೀಸರು ಹರಸಾಹಸ ಪಡುವಂತಾಗಿದ್ದು, ಅಪಘಾತಕ್ಕೊಳಗಾದ ಬಸ್ ಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಸ್ಥಳಕ್ಕೆ ಕ್ರೇನ್ ಹಾಗೂ ಜೆಸಿಬಿ ಗಳಿಂತ ತೆರವು ಕಾರ್ಯಾಚರಣೆ ಮಾಡಲಾಗಿದೆ.
ಸ್ಥಳಕ್ಕೆ ಎಎಸ್ಪಿ ಶಂಕರ ಮಾರಿಹಾಳ, ಸಿಪಿಐ ರಾಯಗೊಂಡ ಜನಾರ ಹಾಗೂ ಸಿಬ್ಬಂದಿ ಭೇಟಿ ನೀಡಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories