ಬೈಂದೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮಹಿಳೆ ಮೃತ್ಯು

ಬೈಂದೂರು: ನಿಂತಿದ್ಧ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ.

ಲಾರಿ ಚಾಲಜ ಮೂತ್ರ ವಿಸರ್ಜನೆಗೆಂದು ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿದ್ದು ಅತೀ ವೇಗದಿಂದ ಬಂದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಬಡಿದ ಕಾರಣ ದುರ್ಘಟನೆ ಸಂಭವಿಸಿದೆ.

ಮೃತರನ್ನು ಲಾವಣ್ಯ ಎಂದು ಗುರುತಿಸಲಾಗಿದೆ.

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯ ಬಲಬದಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಚಾಲಕನ ಪಕ್ಕದ ಸೀಟಿನಲ್ಲಿ  ಕುಳಿತು ಪ್ರಯಾಣಿಸುತ್ತಿದ್ದ  ಲಾವಣ್ಯ ರವರಿಗೆ ತಲೆಗೆ ಗಂಭೀರ ಸ್ವರೂಪದದ ರಕ್ತಗಾಯವಾಗಿ ಪ್ರಜ್ಞೆ ತಪ್ಪಿದ್ದು ಕಾರಿನ ಚಾಲಕ ಹೇಮಂತನಿಗೆ ಸಣ್ಣಪುಟ್ಟ ತರಚಿದ ಗಾಯ ಉಂಟಾಗಿದೆ. ತಕ್ಷಣ ಅಂಬುಲೆನ್ಸ್  ನಲ್ಲಿ ಚಿಕಿತ್ಸೆ ಬಗ್ಗೆ ಬೈಂದೂರು  ಸರಕಾರಿ ಆಸ್ಪತ್ರೆಗೆ  ಕರೆದುಕೊಂಡು  ಬಂದಲ್ಲಿ ಗಾಯಾಳು ಲಾವಣ್ಯ ರವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 06/2024 ಕಲಂ: 279, 337, 304(A) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories