ಚಿಕ್ಕಮಗಳೂರು:ತಾಲೂಕಿನ ಬಾಬಾ ಬುಡನ್ ಗಿರಿ ಬಳಿ ಭಾನುವಾರ ಪ್ರವಾಸಿ ಬಸ್ ಪಲ್ಟಿಯಾಗಿ , 23 ಜನರು ಗಾಯಗೊಂಡಿದ್ದಾರೆ. ಅವಘಡದಲ್ಲಿ ಬಸ್ ನಲ್ಲಿದ್ದ 6 ಜನರಿಗೆ ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ.
ಬಾಬಾ ಬುಡನ್ ಗಿರಿ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ. ಪ್ರವಾಸಿಗರು ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.