ಎರಡು ಕಾರು – ಲಾರಿ ನಡುವೆ ಅಪಘಾತ | ಓರ್ವ ಮೃತ್ಯು – ಐದು ಮಂದಿಗೆ ಗಾಯ

ಹಾಸನ : ಎರಡು ಕಾರುಗಳು ಹಾಗೂ ಲಾರಿ ನಡುವೆ ಅಪಘಾತವಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ.ಐದು ಮಂದಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಭೀರವಾಗಿದೆ.

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕೆಂಪುಹಳ್ಳ ಬಳಿ ಘಟನೆ ನಡೆದಿದ್ದು ಧರ್ಮಸ್ಥಳದಿಂದ-ಬೆಂಗಳೂರಿಗೆ ಕಡೆಗೆ ಬರುತ್ತಿದ್ದ ಕಾರುಗಳು ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಡಿಕ್ಕಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯ ಕೆಂಪುಹಳ್ಳ‌ ತಿರುವಿನಲ್ಲಿ ಕಾರು ಓವರ್ ಟೆಕ್ ಮಾಡುವಾಗ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ ಬೆಂಗಳೂರು ಮೂಲದವರು. ಕೂದಲೆಳೆ ಅಂತರದಲ್ಲಿ ಲಾರಿ ಪ್ರಪಾತಕ್ಕೆ ಬೀಳುವುದು ತಪ್ಪಿದೆ.

ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಗಿದೆ.ಗಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories