ಕುದೂರು : ಬಸ್ ಬೈಕ್ ಗೆ ಡಿಕ್ಕಿ, ಬೈಕ್ ಸವಾರ ಸಾವು

ಕುದೂರು : ಸೋಲೂರು ಬಳಿಯ ರೈಲ್ವೆ ಸೇತುವೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್‌ ಬೈಕ್‌ಗೆ ಡಿಕ್ಕಿಯಾಗಿ ಸವಾರ ಮಲ್ಲಪ್ಪನಹಳ್ಳಿಯ ವೆಂಕಟಾಚಲಯ್ಯ (38) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಕುದೂರು ಮಾರ್ಗವಾಗಿ ತೊಂಡಗೆರೆ ಗ್ರಾಮಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ತೆರಳುತ್ತಿತ್ತು.ಈ ವೇಳೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯಿತು.ವೆಂಕಟಾಲಯ್ಯ ಅರು ಸೋಲೂರಿನ ಶ್ರೀರಾಮ್ ಫೈನಾನ್ಸ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories