ಮಂಗಳೂರು: ಕಾರಿಗೆ ಆಕಸ್ಮಿಕ ಬೆಂಕಿ – ತಾಯಿ-ಮಕ್ಕಳ ರಕ್ಷಣೆ

ಮಂಗಳೂರು: ಕಿನ್ನಿಗೋಳಿ ಮುಖ್ಯರಸ್ತೆಯ ಮಾರುಕಟ್ಟೆಯ ಮುಂಭಾಗದಲ್ಲಿ ಕಾರೊಂದು ಆಕಸ್ಮಿಕವಾಗಿ ಹೊತ್ತಿ ಉರಿದ ಘಟನೆ ಅಕ್ಟೋಬರ್ 7 ಸೋಮವಾರ ನಡೆದಿದೆ.

ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ನಿವಾಸಿ ಜಾಸ್ಮಿನ್ ಎಂಬವರು ಮತ್ತೊಬ್ಬ ಮಹಿಳೆ ಹಾಗೂ ಇಬ್ಬರು ಮಕ್ಕಳೊಂದಿಗೆ ಕಿನ್ನಿಗೋಳಿ ಮಾರುಕಟ್ಟೆಯ ಮುಂಭಾಗದಲ್ಲಿ ಕಾರು ನಿಲ್ಲಿಸಿದ್ದ ವೇಳೆ ವಾಹನದಿಂದ ಹೊಗೆ ಬರಲಾರಂಭಿಸಿದೆ.

ಕಾರಿನಲ್ಲಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಹಾಯಕ್ಕಾಗಿ ಕಿರುಚಾಡಿದ್ದು, ತಕ್ಷಣ ಸ್ಥಳೀಯರು ಜಮಾಯಿಸಿ ಅಪಾಯದಿಂದ ಪಾರು ಮಾಡಿದ್ದಾರೆ.

ಸ್ಥಳೀಯ ಅಂಗಡಿ ಮಾಲೀಕ ರಾಘವೇಂದ್ರ ಪ್ರಭು ಅವರು ಸಮೀಪದ ನಿವಾಸಿಗಳ ನೆರವಿನೊಂದಿಗೆ ಸ್ಥಳೀಯ ಪೆಟ್ರೋಲ್ ಪಂಪ್‌ನಿಂದ ಬೆಂಕಿ ನಂದಿಸುವ ಯಂತ್ರವನ್ನು ಬಳಸಿ ಬೆಂಕಿಯನ್ನು ನಂದಿಸಿದರು.

Latest Indian news

Popular Stories