Accident NewsDakshina Kannada
ಮಂಗಳೂರು: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರು: ರಸ್ತೆ ಬದಿಯ ಕಬ್ಬಿಣದ ತಡೆ ಬೇಲಿಗೆ ಬೈಕ್ ಢಿಕ್ಕಿಯಾಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಬಂಟ್ವಾಳದ ಲೊರೆಟ್ಟೋಪದವು ನಿವಾಸಿ ಸಲ್ಮಾನ್ ಫಾರಿಸ್ (19) ಮೃತಪಟ್ಟ ಯುವಕ.
ಸಲ್ಮಾನ್ ಕೊಣಾಜೆಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಶುಕ್ರವಾರ ತನ್ನ ಮಿತ್ರ ಮುಹಮ್ಮದ್ ಶಾಕಿರ್ನ ಬೈಕ್ನಲ್ಲಿ ಮಂಗಳೂರಿಗೆ ಬರುತ್ತಿದ್ದರು. ಈ ವೇಳೆ ನೇತ್ರಾವತಿ ಸಂಕದ ಬಳಿ ಬೈಕ್ ನಿಯಂತ್ರಣ ತಪ್ಪಿ ತಡೆ ಬೇಲಿಗೆ ಢಿಕ್ಕಿ ಹೊಡೆದಿದ್ದು, ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದರು. ಸಲ್ಮಾನ್ ಫಾರಿಸ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿರುವ ಶಾಕಿರ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.