ತೋಟಗಾರಿಕೆ ವಿವಿಗೆ ಕೋವಿಡ್ ಕಾಟ

ಬಾಗಲಕೋಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ವಿವಿಧ ಮಹಾವಿದ್ಯಾಲಯಗಳ 20 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಮಕು ದೃಢಪಟ್ಟಿದೆ ಎಂದು ವಿವಿ ಕುಲಪತಿ ಡಾ.ಕೆ.ಎಂ.ಇದಿರೇಶ್ ಮಾಹಿತಿ ನೀಡಿದ್ದಾರೆ.
20 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೂ ಏಪ್ರಿಲ್ 20 ರವರೆಗೆ ಆಫ್ ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಾಗಲಕೋಟೆ, ಬೆಂಗಳುರು, ಶಿರಸಿ ತೋಟಗಾರಿಕೆ ಮಹಾವಿದ್ಯಾಲಯಗಳ 20 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಆಫ್ ಲೈನ್ ಕ್ಲಾಸ್ ಬದಲಿಗೆ ಆನ್ ಲೈನ್ ಕ್ಲಾಸ್ ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Latest Indian news

Popular Stories