ಹಣದ ಕೊರತೆ ಇದ್ದರೆ ಕಾಂಗ್ರೆಸ್ ಸರ್ಕಾರ ಯಾಕೆ ನಡೆಸುತ್ತಿದೆ : ಎಚ್ ಡಿ ಕುಮಾರಸ್ವಾಮಿ

ಬೆಳಗಾವಿ :ಹಣದ ಕೊರತೆ ಇದ್ದರೆ ಕಾಂಗ್ರೆಸ್ ಸರ್ಕಾರ ಯಾಕೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್. ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬರದ ವಿಚಾರವಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ರಾಜ್ಯ ಸರ್ಕಾರದ ವೈಫಲ್ಯ ಕುರಿತು ಸದನದಲ್ಲಿ ಮಾತನಾಡುತ್ತೇನೆ.ಬರ ಪರಿಹಾರ ಬಿಡುಗಡೆ ವಿಚಾರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ.ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕುವಂತೆ ರಾಜಪಾಲರಿಗೆ ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ ಜನರಿಂದ ತೆರಿಗೆ ಸಂಗ್ರಹ ಆಗುತಿದೆ ಜನ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಹಣದ ಕೊರತೆ ಇದ್ದರೆ ಸರ್ಕಾರ ಯಾಕೆ ನಡೆಸುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು

Latest Indian news

Popular Stories