ಬೆಳಗಾವಿ : ಕೆಪಿಎಸ್ ಸಿ ಸೇರಿ ಸರ್ಕಾರಿ ಪರೀಕ್ಷೆಗಳಲ್ಲಿ ನಕಲು, ಓಎಂಆರ್ ಶೀಟ್ ತಿದ್ದುಪಡಿ ಇತ್ಯಾದಿಗಳನ್ನು ತಡೆಗಟ್ಟಲು ಕಠಿಣ ಕಾಯ್ದೆಯನ್ನು ರಾಜ್ಯ ಸರ್ಕಾರ ರೂಪಿಸಿದ್ದು, ಕರ್ನಾಟಕ ಸಾರ್ವಜನಿಕ ಪರೀಕ್ಷೆ ವಿಧೇಯಕ ಮಂಡಿಸಿದೆ.
ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲಿನ ಭ್ರಷ್ಟಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕವನ್ನು ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.ಈ ಕಾಯ್ದೆಯನ್ವಯ ತಪ್ಪತಸ್ಥರಿಗೆ 5-12 ವರ್ಷದವರೆಗೆ ಜೈಲು ಶಿಕ್ಷೆ ಮತ್ತು 15 ಲಕ್ಷದಿಂದ 10 ಕೋಟಿ ರೂ.ವರೆಗೆ ದಂಡ ಶಿಕ್ಷೆಯಾಗಲಿದೆ.