ಬೆಳಗಾವಿ: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ.
ಮದುವೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರು ಚಾಲಕ ಶಾರುಕ್ ಪೆನ್ಡಾರಿ(30), ಇಕ್ಬಾಲ್ ಜಮಾದಾರ್(50), ಸಾನಿಯಾ ಲಂಗೋಟಿ(37), ಉಮ್ರಾ ಬೆಗಮ್ ಲಂಗೋಟಿ(17), ಶಬನಮ್ ಲಂಗೋಟಿ(37), ಪರಾನ್ ಲಂಗೋಟಿ(13) ಮೃತರು. ಇವರೆಲ್ಲರೂ ಧಾರವಾಡ ನಗರದ ನಿವಾಸಿಗಳು ಎಂದು ತಿಳಿದುಬಂದಿದ.
ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದ್ದು, ಈ ಪೈಕಿ ಆರು ಜನ ಯಾರೆಲ್ಲಾ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.