ಬಳ್ಳಾರಿಯಲ್ಲಿ ಭೀಕರ ಅಪಘಾತ : ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರ ಸಾವು

ಬಳ್ಳಾರಿ:ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಈ ಒಂದು ಭೀಕರ ಅಪಘಾತ ನಡೆದಿದೆ.

ಇಮ್ರಾನ್ (23) ಕಲಂ ಸಾಬ್ (19) ಮೃತ ಯುವಕರು ಎಂದು ತಿಳಿದುಬಂದಿದೆ.

ಗಾಯಗೊಂಡ ಶೇಕ್ ಜೋಸಿಂನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೆಕ್ಕಲಕೋಟೆಯಿಂದ ಸಿರುಗುಪ್ಪ ಕಡೆಗೆ ಯುವಕರು ತೆರಳುತ್ತಿದ್ದರು ಜ್ಯುವೆಲರಿ ಶಾಪ್ ನಲ್ಲಿ ಮೂವರು ಯುವಕರು ಕೆಲಸ ಮಾಡುತ್ತಿದ್ದರು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories