ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕುರಿತು ಅಧಿಕಾರಿಗಳೊಂದಿಗೆ ಸಭೆ ಇಲಾಖೆಗಳ ಹೊಸ ಕಟ್ಟಡ ನಿರ್ಮಾಣ,ನವೀಕರಣಕ್ಕೂ ಮುನ್ನ ಒಪ್ಪಿಗೆ ಕಡ್ಡಾಯ:ಡಿಸಿ ಮಾಲಪಾಟಿ

ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿರುವ ಕಟ್ಟಡಗಳ ನವೀಕರಣ ಮತ್ತು ಹೊಸ ಕಟ್ಟಡಗಳು ನಿರ್ಮಾಣ ಮಾಡುವುದಕ್ಕೆ ಮುಂಚೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಹೇಳಿದರು.
ನಗರದ ಸರಕಾರಿ ಅತಿಥಿಗೃಹದ ಸಮೀಪ ನಿರ್ಮಾಣವಾಗುತ್ತಿರುವ ಜಿಲ್ಲಾ ಸಂಕೀರ್ಣ ಕಟ್ಟಡದ ಪ್ರಗತಿ ಮತ್ತು ಇಲಾಖೆಗಳ ಕಚೇರಿ ಹಂಚಿಕೆಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ಜಿಲ್ಲಾ ಕಚೇರಿಗಳು ಹಾಗೂ ಅತ್ಯವಶ್ಯಕ ನಾಗರಿಕ ಸೇವೆಗಳು ಒಂದೇ ಛಾವಣಿಯಡಿ ನಾಗರಿಕರಿಗೆ ಸುಲಭವಾಗಿ ದೊರಕಲಿ ಎಂಬ ಸದುದ್ದೇಶದಿಂದ ಬಳ್ಳಾರಿಯ ಡಾ.ರಾಜ್‌ಕುಮಾರ ರಸ್ತೆಯಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಮಾಡಲಾಗುತ್ತಿದ್ದು, ಇನ್ನೂ ಕೆಲ ದಿನಗಳಲ್ಲಿ ಸರಕಾರಿ ಕಚೇರಿಗಳಿಗೆ ಹಂಚಿಕೆಯಾಗಲಿವೆ ಎಂದು ತಿಳಿಸಿದ ಡಿಸಿ ಮಾಲಪಾಟಿ ಅವರು ಈ ಸಂದರ್ಭದಲ್ಲಿ ಇಲಾಖೆಗಳ ಅಧಿಕಾರಿಗಳು ತಮ್ಮ ಈಗಿರುವ ಕಚೇರಿಗಳನ್ನು ನವೀಕರಣ ಮಾಡುವುದು ಮತ್ತು ಇಲಾಖೆಗಳ ಜಿಲ್ಲಾಮಟ್ಟದ ಕಚೇರಿಗಳ ನೂತನ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಮುಂದಾಗುವುದು ಬೇಡ; ಆ ರೀತಿಯಾದಲ್ಲಿ ಜಿಲ್ಲಾಧಿಕಾರಿಗಳ ಒಪ್ಪಿಗೆ ಪಡೆದುಕೊಂಡು ಮುಂದುವರಿಯಬೇಕು ಎಂದು ಅವರು ಸೂಚನೆ ನೀಡಿದರು.
ತಹಸೀಲ್ದಾರರ ಕಚೇರಿ, ಖಜಾನೆ, ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಆರೋಗ್ಯ ಇಲಾಖೆ, ಜವಳಿ,ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಹಕಾರ ಸಂಘಗಳ ಇಲಾಖೆ, ವಿಭಾಗೀಯ ಲೆಕ್ಕಾಧಿಕಾರಿಗಳ ಕಚೇರಿ, ವಾರ್ತಾ ಇಲಾಖೆ, ಭೂ ದಾಖಲೆ ಇಲಾಖೆ,ಅಂಕಿಸAಖ್ಯೆ ಇಲಾಖೆ ಸೇರಿದಂತೆ ಬಹಳಷ್ಟು ಇಲಾಖೆಗಳು ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳಿಗೆ ಈ ನೂತನ ಜಿಲ್ಲಾ ಸಂಕೀರ್ಣದಲ್ಲಿ ಹಂಚಿಕೆ ಮಾಡಲಾಗಿರುವ ವಿಸ್ತೀರ್ಣ ಸಮರ್ಪಕವಾಗಿದೆಯೇ,ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅವಶ್ಯವೇ ಹಾಗೂ ಇನ್ನೀತರ ಮಾಹಿತಿಗಳನ್ನು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಡಿಸಿ ಮಾಲಪಾಟಿ ಅವರು ಪಡೆದುಕೊಂಡರು.
ಜಿಲ್ಲಾ ಸಂಕೀರ್ಣ ನಿರ್ಮಾಣದ ಹೊಣೆ ಹೊತ್ತಿರುವ ಕರ್ನಾಟಕ ಗೃಹಮಂಡಳಿ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಅವರು ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಪ್ರೋಬೆಷನರಿ ಐಎಎಸ್ ಅನ್ಮೋಲ್ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Latest Indian news

Popular Stories