ವಲ್ರ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ಹೊಲಿಗೆ ಯಂತ್ರ ವಿತರಣೆ

ಬಳ್ಳಾರಿ,ಜೂ.28(ಕರ್ನಾಟಕ ವಾರ್ತೆ): ವಲ್ರ್ಡ್ ವಿಷನ್ ಇಂಡಿಯಾ ಸಂಸ್ಥೆಯಿಂದ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿದ ಹೆಣ್ಣು ಮಕ್ಕಳಿಗೆ ಹೊಲಿಗೆ ಯಂತ್ರ ವಿತರಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸೋಮವಾರ ಚಾಲನೆ ನೀಡಿದರು.
ವಿದ್ಯಾಭ್ಯಾಸ ಮುಂದುವರೆಸಲು ಆಸಕ್ತಿ ಇಲ್ಲದ ಹೆಣ್ಣು ಮಕ್ಕಳಿಗೆ ಗ್ರಾಮೀಣ ಸಿಂಡಿಕೇಟ್ ಮೂಲಕ ಅವರಿಗೆ ಬಟ್ಟೆ ಹೊಲಿಯುವ ತರಬೇತಿ ನೀಡಲಾಗಿದೆ. ತರಬೇತಿ ಪಡೆದ ಹೆಣ್ಣು ಮಕ್ಕಳಿಗೆ 17 ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಈ ಸಮಯದಲ್ಲಿ ವಲ್ರ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕರಾದ ಪ್ರೇಮಲತಾ ಮತ್ತು ಸಿಬ್ಬಂದಿ ಹಾಗೂ ಇತರರು ಇದ್ದರು.

Latest Indian news

Popular Stories