ಆನಂದರಾವ್ ಸರ್ಕಲ್‍ನ ಫ್ಲೈಓವರ್‌ನಿಂದ ಜಿಗಿದು ಹೋಟೆಲ್ ಕಾರ್ಮಿಕ ಆತ್ಮಹತ್ಯೆ

ಬೆಂಗಳೂರು,ಏ.24- ಹೋಟೆಲ್ ಕಾರ್ಮಿಕರೊಬ್ಬರು ಫ್ಲೈಓವರ್‍ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಂದು ಬೆಳಗಿನ ಜಾವ ನಡೆದಿದೆ.

ಮೂಲತಃ ಹಾಸನ ಜಿಲ್ಲೆಯ ತಿಮ್ಮರಾಜು(40) ಆತ್ಮಹತ್ಯೆಗೆ ಶರಣಾದವರು. ನಗರದ ಹೊಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ತಿಮ್ಮರಾಜು ಇಂದು ಬೆಳಗಿನಜಾವ 3 ಗಂಟೆ ಸುಮಾರಿನಲ್ಲಿ ಆನಂದರಾವ್ ಸರ್ಕಲ್‍ನ ಫ್ಲೈಓವರ್ ಮೇಲೆ ಬಂದು ಏಕಾಏಕಿ ಜಿಗಿದು ಪ್ರಾಣಬಿಟ್ಟಿದ್ದಾರೆ.

ಸುದ್ದಿ ತಿಳಿದು ಉಪ್ಪಾಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವ್ಯಕ್ತಿಯ ಆತ್ಮಹತ್ಯೆಗೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest Indian news

Popular Stories