ಬೆಂಗಳೂರು: ಅ.9ರಂದು ಬೆಂಗಳೂರಲ್ಲಿ ಸಿಎಂ ಸಿದ್ಧರಾಮಯ್ಯ ಜನತಾ ದರ್ಶನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಅಕ್ಟೋಬರ್.9ರಂದು ಬೆಳಗ್ಗೆ 10.30ರಿಂದ ಸಿಎಂ ಸಿದ್ಧರಾಮಯ್ಯ ಅವರು ಜನತಾ ದರ್ಶನ ಆರಂಭಿಸಲಿದ್ದಾರೆ.
ಸೆ.25ರಂದು ಮೊದಲ ಜಿಲ್ಲಾ ಉಸ್ತುವಾರಿ ಸಚಿವ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿತ್ತು. ಆ ಬಳಿತ ತಾಲೂಕು ಕೇಂದ್ರಗಳಲ್ಲಿಯೂ ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದರು. ಇದೇ ರೀತಿ ಪ್ರತಿ ತಿಂಗಳು ಜನತಾ ದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವರು ನಡೆಸುವಂತೆಯೂ ಸೂಚಿಸಿದ್ದಾರೆ. ಅದರಂತೆ ಈ ತಿಂಗಳ ಅಕ್ಟೋಬರ್.25ರಂದು ಎರಡನೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯೋ ಸಾಧ್ಯತೆ ಇದೆ.