ಬಿಜೆಪಿ ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, ಫೆಬ್ರವರಿ 20: ಬಿಜೆಪಿ ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ ಎಂದು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದು ಟೀಕಿಸಿ, ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ , ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದು ಹೇಳಿದರು.

Latest Indian news

Popular Stories