ಮೀನುಗಾರರ ರಕ್ಷಣೆಗೆ ಸಮುದ್ರ ಆಂಬ್ಯುಲೆನ್ಸ್​ ಯೋಜನೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀನುಗಾರರ ಮೇಲೆ ವಿಶೇಷ ಕಾಳಜಿ ವಹಿಸಿರುವ ರಾಜ್ಯ ಕಾಂಗ್ರೆಸ್​ಸರ್ಕಾರ, ಮೀನುಗಾರರ ರಕ್ಷಣೆಗೆಂದೇ ಸಮುದ್ರ ಆಂಬ್ಯುಲೆನ್ಸ್​ ಯೋಜನೆಯನ್ನು ಬಜೆಟ್​ ಮಂಡನೆ ವೇಳೆ ಘೋಷಿಸಿದೆ.

ಇಂದು 15ನೇಯ ದಾಖಲೆ ಬಜೆಟ್​ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷವಾಗಿ 3 ಸಾವಿರ ಕೋಟಿ ರೂಪಾಯಿ ಯೋಜನೆಯನ್ನು ಘೋಷಣೆ ಮಾಡಿದರು.

ಸಮುದ್ರದಲ್ಲಿ ಮೀನುಗಾರಿಕೆಯನ್ನು ನೆಚ್ಚಿಕೊಂಡಿರುವ ಮೀನುಗಾರರ ರಕ್ಷಣೆಗೆ ವಿಶೇಷ ಗಮನ ವಹಿಸಲಾಗುವುದು. ಯಾವುದೇ ತುರ್ತು ಸಂದರ್ಭಗಳಲ್ಲಿ ಮೀನುಗಾರರ ಜೀವ ಉಳಿಸಲು ಅತ್ಯಾಧುನಿಕ ಸಮುದ್ರ ಆಂಬ್ಯುಲೆನ್ಸ್​ ಖರೀದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉತ್ತರ ಕನ್ನಡದ ಹೊನ್ನಾವರ ಅಥವಾ ಕಾಸರಗೋಡಿನಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಶಿವಮೊಗ್ಗದ ಭದ್ರಾವತಿಯಲ್ಲಿ ಅತ್ಯಾಧುನಿಕ​ ಮೀನು ಮಾರುಕಟ್ಟೆಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

Latest Indian news

Popular Stories