ಜಿಎಸ್‌ಟಿ ಪರಿಹಾರ ಬಿಡುಗಡೆಗೆ ಹಣಕಾಸು ಸಚಿವೆ ಒಪ್ಪಿಗೆ

ನವದೆಹಲಿ: ಸಚಿವ ಸಂಪುಟ ರಚನೆ ಬಗ್ಗೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆಗೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಗೆ ಕಾಯುತ್ತಿದ್ದೇನೆ ಎಂದಿದ್ದಾರೆ. ಕೊರೋನಾ ಲಸಿಕೆ ಬಗ್ಗೆ ಕೇಂದ್ರ ಆರೋಗ್ಯ ಸಚಿವರ ಜೊತೆ ಚರ್ಚಿಸಿದ್ದೇನೆ, ಮುಂದಿನ ತಿಂಗಳಿನಿAದ ದಿನಕ್ಕೆ 1.5 ಲಕ್ಷ ಕೋವಿಡ್ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಲಿದೆ. ಇದರಿಂದ ಪ್ರತಿದಿನ ಸುಮಾರು 5 ಲಕ್ಷ ಮಂದಿಗೆ ಲಸಿಕೆ ನೀಡಬಹುದು ಎಂದರು.
ಯಾವುದೇ ರೀತಿಯಲ್ಲಿಯೂ ರಾಜ್ಯದಲ್ಲಿ ಯೂರಿಯಾ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸಹ ಕೇಂದ್ರ ರಸಗೊಬ್ಬರ ಖಾತೆ ಸಚಿವರೂ ಕೂಡ ಆಗಿರುವ ಆರೋಗ್ಯ ಸಚಿವರು ಹೇಳಿದ್ದಾರೆ. ಕೋವಿಡ್-3ನೇ ಅಲೆ ಬರುವ ಸಂದರ್ಭದಲ್ಲಿ ವೈದ್ಯಕೀಯ ಮೂಲಭೂತ ಸೌಕರ್ಯಗಳಿಗೆ ಕೊರತೆಯಾಗದಂತೆ 23 ಸಾವಿರ ಕೋಟಿ ರೂಪಾಯಿಗಳನ್ನು ದೇಶ ಮಟ್ಟದಲ್ಲಿ ಕೇಂದ್ರ ಸರ್ಕಾರ ನೀಡುತ್ತಿದ್ದು, ಅದರಲ್ಲಿ 800 ಕೋಟಿ ರೂಪಾಯಿ ಕರ್ನಾಟಕಕ್ಕೆ ಬಿಡುಗಡೆ ಮಾಡುತ್ತಿದ್ದು, ಶೇ. 15ರಷ್ಟನ್ನು ಈಗಾಗಲೇ ನೀಡಿದ್ದೇವೆ, ಇನ್ನುಳಿದ ಭಾಗವನ್ನು ಆರೋಗ್ಯ ಮೂಲಸೌಕರ್ಯಕ್ಕೆ ಬಿಡುಗಡೆ ಮಾಡುವುದಾಗಿ ಕೇಂದ್ರ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ ಮಾಹಿತಿ ನೀಡಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ವಿವರ ನೀಡಿದ ಸಿಎಂ ಬೊಮ್ಮಾಯಿ, ಕಳೆದ ವರ್ಷದ ಜಿಎಸ್‌ಟಿ ಪರಿಹಾರ ಮೊತ್ತವಾದ 11 ಸಾವಿರದ 400 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಅದಕ್ಕೆ ಕಂತುಗಳ ರೂಪದಲ್ಲಿ ಮತ್ತು ಈ ವರ್ಷದ ಜಿಎಸ್ ಟಿ ಪರಿಹಾರ ಹಣ 18 ಸಾವಿರ ಕೋಟಿ ರೂಪಾಯಿಗಳನ್ನು ಕೂಡ ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ ಎಂದರು.
ಮೇಕೆದಾಟು ನಿರ್ಮಾಣವನ್ನು ವಿರೋಧಿಸಿ ತಮಿಳು ನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಯವರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, ಅವರು ಅವರ ಕೆಲಸ ಮಾಡುತ್ತಾರೆ, ಅದಕ್ಕೂ ನಮಗೂ ಸಂಬAಧವಿಲ್ಲ, ಮೇಕೆದಾಟು ನಿರ್ಮಾಣದಲ್ಲಿ ನಮ್ಮ ಹಕ್ಕಿದೆ. ಮೇಕೆದಾಟು ಯೋಜನೆಯನ್ನು ಮಾಡಿಯೇ ಸಿದ್ದ ಎಂದರು.

Latest Indian news

Popular Stories