ನಾಳೆ ಬೆಂಗಳೂರಿನ ಎಲ್ಲಾ ಶಾಲೆ,ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

ಬೆಂಗಳೂರು: ನಗರದಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆರೇಂಜ್ ಅಲರ್ಟ್ ಕೂಡ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೇ ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

ಇಂದು ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ಆದರೇ ನಾಳೆ ಕಾಲೇಜುಗಳಿಗೆ ರಜೆ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಅಂದಹಾಗೆ ಬೆಂಗಳೂರಲ್ಲಿ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಿದ್ದಾರೆ.

Latest Indian news

Popular Stories