ಲಾರೆನ್ಸ್ ಬಿಷ್ಣೋಯ್ ಮುಂದಿನ ಗುರಿ ರಾಹುಲ್ ಗಾಂಧಿ:ಒಡಿಯಾ ನಟ ವಿವಾದಾತ್ಮಕ ಹೇಳಿಕೆ

ಭುವನೇಶ್ವರ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ನಂತರದ ಗುರಿ ರಾಹುಲ್ ಆಗಿರಬೇಕು ಎಂದು ಒಡಿಯಾ ನಟ ಬುದ್ಧಾದಿತ್ಯ ಮೊಹಾಂತಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಕೊಂದ ನಂತರ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಮುಂದಿನ ಗುರಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯಾಗಿರಬೇಕು ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮೊಹಾಂತಿ ಹೇಳಿದ್ದಾರೆ

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಒಡಿಯಾ ನಟ ಬುದ್ಧಾದಿತ್ಯ ಮೊಹಾಂತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಒಡಿಶಾ ಘಟಕದ ಸದಸ್ಯರು ಶುಕ್ರವಾರ ರಾಜಧಾನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

NSUI ದೂರಿನ ಜೊತೆಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನ ಸ್ಕ್ರೀನ್‌ಶಾಟ್ ಅನ್ನು ಸಹ ಸಲ್ಲಿಸಿದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬಳಿಕ ಮೊಹಾಂತಿ ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕ ಕ್ಷಮೆಯಾಚಿಸಿದರು, ರಾಹುಲ್ ಗಾಂಧಿಯನ್ನು ಯಾವುದೇ ರೀತಿಯಲ್ಲಿ ಕೀಳಾಗಿಸುವುದಲ್ಲ ಎಂದು ಹೇಳಿದರು.

Latest Indian news

Popular Stories