ಕಾಂಗ್ರೆಸ್‌ ದುರಾಡಳಿತಕ್ಕೆ ಬೇಸತ್ತ ಜನತೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇಂಡಿ(ಮೇ.05): ಬಿಜೆಪಿ ಆಡಳಿತವಿದ್ದಾಗ ಮಳೆ, ನೆರೆಹಾವಳಿ ಇದ್ದರೂ ರೈತರು ಖುಷಿಯಲ್ಲಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಮಳೆಯೂ ಇಲ್ಲ, ಬೆಳೆಯೂ ಇಲ್ಲ. ಕೇವಲ ಬರವಿದೆ. ಯಾಕೆ ಏನು ಎಂಬುದು ಭಗವಂತನಿಗೆ ಗೊತ್ತು ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಟೀಕಾ ಪ್ರಹಾರ ನಡೆಸಿದರು.

ತಾಲೂಕಿನ ತಾಂಬಾ ಮಹಾಶಕ್ತಿ ಕೇಂದ್ರದ ತಡವಲಗಾ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ದುರಾಡಳಿತಕ್ಕೆ ಜನತೆ ಬೇಸತ್ತು, ಇಂದು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿ ಕೂರುವಷ್ಟು ಸ್ಥಾನವೂ ದೇಶದ ಜನರು ಕಾಂಗ್ರೆಸ್‌ಗೆ ನೀಡಿಲ್ಲ. ಇದನ್ನು ನೋಡಿ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.

ದೇಶದ ರಕ್ಷಣೆಗೆ ಮೋದಿ ಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿಗಾಗಿ ಲಕ್ಷಾಂತರ ಕೋಟಿ ರುಪಾಯಿಗಳ ಹಣದ ಹೊಳೆ ಹರಿಯಿಸಿದ್ದರೂ ಒಂದು ಪೈಸೆಯೂ ಅದರಲ್ಲಿ ಭ್ರಷ್ಟಾಚಾರ ನಡೆಯದಂತೆ ನೋಡಿಕೊಂಡರು. ಅವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಲು ದೇಶದ ಜನರು ತಿರ್ಮಾನ ಮಾಡಿದ್ದಾರೆ. ಮೋದಿ ನಾಯಕತ್ವ ಸಾಮಾನ್ಯ ಜನರಲ್ಲಿ ವಿಶ್ವಾಸ ತುಂಬಿದೆ ಎಂದು ಹೇಳಿದರು.

Latest Indian news

Popular Stories