ನವದೆಹಲಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನಿರ್ಗಮಿತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಶ್ಲಾಘಿಸಿರುವ ಪ್ರಧಾನಿ ಮೋದಿ, ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ರೀತಿ ಅವಿಸ್ಮರಣೀಯ ಎಂದು ಕೊಂಡಾಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ ದಶಕಗಳ ಕಾಲ ಶ್ರಮಿಸಿ ರಾಜ್ಯದ ಮೂಲೆ ಮೂಲೆಗೂ ಸುತ್ತಾಡಿ, ಜನರನ್ನು ಒಂದೆಡೆ ಸೇರಿಸಿ ಬಿಜೆಪಿ ಕಟ್ಟಿ ಬೆಳೆಸಿದ್ದು ಸ್ಮರಣೀಯ. ಪಕ್ಷದ ಅಭಿವೃದ್ಧಿಗೆ ಬಿ.ಎಸ್.ವೈ. ಕೊಡುಗೆ ಬಣ್ಣಿಸಲು ಪದಗಳಿಲ್ಲ ಎಂದು ಪ್ರಧಾನಿಯವರು ಹಾಡಿ ಹೊಗಳಿದ್ದಾರೆ.
ಯಡಿಯೂರಪ್ಪನವರಿಗೆ ಪಕ್ಷದ ಮೇಲಿನ ನಿಷ್ಠೆ, ಸಮಾಜ ಕಲ್ಯಾಣಕ್ಕಾಗಿ ಅವರ ಬದ್ಧತೆ ಮೆಚ್ಚಲೇಬೇಕು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.