ಬೆಂಗಳೂರು: ಮೈತ್ರಿ ಸರ್ಕಾರ ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಮಾಜಿ ಸಿಎಂ ಕುಮಾರಸ್ವಾಮಿಯವರ ಹೇಳಿಕೆಗೆ ಗರಂ ಆಗಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕುಣಿಲಿಕ್ಕೆ ಬಾರದವರು ನೆಲ ಡೊಂಕು ಅಂದ ಹಾಗೆ ಆಯಿತು ಎಂದು ಎಚ್ಸಿ. ಡಿ ಕುಮಾರಸ್ವಾಮಿ ಅವರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆಗೆ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಿದ್ದೆ. ಕುಮಾರಸ್ವಾಮಿ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ.ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.