ಮೇಕೆದಾಟು ಯೋಜನೆ ನಿರ್ಮಾಣ ಖಚಿತ: ಬಿಎಸ್‌ವೈ

ನವದೆಹಲಿ: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ಕುಡಿಯುವ ನೀರು ಯೋಜನೆಯನ್ನು ನೂರಕ್ಕೆ ನೂರರಷ್ಟು ನಮ್ಮ ಸರ್ಕಾರ ಮಾಡೇ ಮಾಡುತ್ತದೆ. ಈ ಬಗ್ಗೆ ಗೊಂದಲ ಬೇಡ ಎಂದು ಮುಖ್ಯಮಂತ್ತಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕುಡಿಯುವ ನದಿ ನೀರು ಯೋಜನೆಯಾಗಿರುವುದರಿಂದ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಈ ಯೋಜನೆ ಜಾರಿಯಿಂದ ಆ ರಾಜ್ಯಕ್ಕೆ ಯಾವುದೇ ತೊಂದರೆಯಿಲ್ಲ. ಈ ಬಗ್ಗೆ ಸಂಬAಧ ಪಟ್ಟವರಿಗೆ ಮನವರಿಕೆ ಮಾಡಿ ಯೋಜನೆ ಆದಷ್ಟು ಶೀಘ್ರ ಆರಂಭಿಸುತ್ತೇವೆ. ಎರಡೂ ರಾಜ್ಯ ಗಳು ಸಹೋದರರಂತೆ ನಡೆದುಕೊಳ್ಳಬೇಕೆಂಬುದು ನನ್ನ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಕರ್ನಾಟಕ ಮತ್ತು ತಮಿಳು ನಾಡು ಅಣ್ಣತಮ್ಮಂದಿರ0ತೆ ಇರಲು ಇದೊಂದು ಉತ್ತಮ ಅವಕಾಶ. ಮೇಕೆದಾಟು ಯೋಜನೆಗೆ ಅಗತ್ಯ ಅನುಮತಿಯನ್ನು ಪಡೆದುಕೊಳ್ಳುತ್ತೇನೆ. ಇದರಿಂದ ಪಕ್ಕದ ರಾಜ್ಯಗಳಿಗೆ ತೊಂದರೆ ಇಲ್ಲದಿರುವುದರಿಂದ ಮೇಕೆದಾಟು ಯೋಜನೆಗೆ ಅವಕಾಶ ಮಾಡಿಕೊಡುವಂತೆ ಸಂಬAಧಪಟ್ಟ ಸಚಿವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಯಡಿಯೂರಪ್ಪ ಹೇಳಿದರು.

Latest Indian news

Popular Stories