ಮಕ್ಕಳ ರಕ್ಷಣಾ ನೀತಿ 2016 ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜಾರಿಗೆ ತರಬೇಕು- ಶಶಿಧರ ಕೋಸಂಬೆ

ಬೀದರ್: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರುವ ಮೂಲಕ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಹೇಳಿದರು.

ಅವರು ಬುಧವಾರ ಚನ್ನಬಸವ ಪಟ್ಟದ್ದೆವರು ರಂಗಮAದಿರಲ್ಲಿ ಬೀದರನಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಿಷನ್ ವಾತ್ಸಲ್ಯ ಯೋಜನೆ. ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ- 2016 ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾನೂನು ಗಳ ಕುರಿತು ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಮತ್ತು ವಿವಿಧ ಇಲಾಖೆಯಡಿ ನಡೆಯುವ ವಸತಿ ಶಾಲೆ, ನಿಲಯಗಳ ಪ್ರಾಂಶುಪಾಲರು ಮತ್ತು ವಾರ್ಡನಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ರಾಜ್ಯದಲ್ಲಿ ವಿವಿಧ ಕಡೆ ಮಕ್ಕಳ ಮೇಲೆ ಅಮಾನವೀಯ ಘಟನೆಗಳು ನಡೆದಿರುವುದನ್ನು ಕಾಣುತ್ತೆವೆ. ಮಕ್ಕಳ ರಕ್ಷಣಾ ನೀತಿ ಪಾಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಕ್ಕಳಿಗೆ ಮನೆಯ ನಂತರದ ಸುರಕ್ಷಿತ ಸ್ಥಳಗಳು ಶಾಲೆಗಳಾಗಬೇಕು. ಮಕ್ಕಳ ರಕ್ಷಣಾ ನೀತಿ 2016 ಪಾಲನೆ ಮಾಡುವಂತೆ ಹೈಕೋರ್ಟ್ ಒಂದು ವರ್ಷದ ಹಿಂದೆ ಆದೇಶ ಮಾಡಿದೆ ಈಗಾಗಲೇ ಆರು ತಿಂಗಳು ಕಳೆದು ಹೋಗಿದ್ದು ಇನ್ನೂ ಆರು ತಿಂಗಳು ಕಾಲಾವಕಾಶವಿದ್ದು ಇದನ್ನು ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಪಾಲನೆ ಮಾಡಬೇಕೆಂದು ಹೇಳಿದರು.

1929 ರಿಂದ ನಮ್ಮ ದೇಶದಲ್ಲಿ ಬಾಲ್ಯ ವಿವಾಹ ನಿಷೇಧ ಇದ್ದರು ಇನ್ನೂ ಪ್ರತಿ ನಿಮಿಷಕ್ಮೆ ಮೂರು ಬಾಲ್ಯ ವಿವಾಹಗಳನ್ನು ನಮ್ಮ ದೇಶಗಳಲ್ಲಿ ನಡೆಯುತ್ತಿವೆ. ಮಕ್ಕಳು ಶಾಲೆಗೆ ಬರದಿದ್ದರೆ ಯಾಕೆ ಬರಲಿಲ್ಲ ಎಂಬ ಮಾಹಿತಿಯನ್ನು ಶಿಕ್ಷಕರು ಸಂಗ್ರಹಿಸಬೇಕು ಮತ್ತು ತಮ್ಮ ಶಾಲಾ ಕಾಲೇಜುಗಳಲ್ಲಿ ಒಂದು ಸಮಿತಿಯನ್ನು ರಚಿಸಿ ಮಕ್ಕಳ ಸಮಸ್ಯೆಗಳನ್ನು ಆಲಿಸುತ್ತಿರಬೇಕು ಹಾಗೂ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ 112 ಗಳನ್ನು ತಮ್ಮ ಶಾಲೆಗಳಲ್ಲಿ ಕಡ್ಡಾಯವಾಗಿ ಬರೆಯಬೇಕೆಂದು ಹೇಳಿದರು.

ಮಕ್ಕಳು ನಮ್ಮ ಆಸ್ತಿ ಅವರ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯಾವುದೇ ಮಕ್ಕಳ ಮೇಲೆ ದೌರ್ಜನ್ಯವಾದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತದೆ ಹಾಗೂ ಶಾಲಾ- ಕಾಲೇಜುಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾAತ ಶಾಬಾದಕರ್ ಮಾತನಾಡಿ, ಶಿಕ್ಷಕರಿಗೆ ಸಮಾಜದಲ್ಲಿ ಗೌರವಯುತ ಸ್ಥಾನವಿದೆ ಅದನ್ನು ಉಳಿಸಿಕೊಂಡು ಹೋಗುವ ಕೆಲಸ ಮಾಡಬೇಕು. ಎಲ್ಲೂ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ನೋಡಿಕೊಳ್ಳಬೇಕು ಒಂದು ವೇಳೆ ಹಾಗೇನಾದರೂ ಆದರೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ನಾನೇ ಖುದ್ದಾಗಿ ದೂರ ನೀಡಿ ತಪ್ಪಿತಸ್ಥ ವಿರುದ್ಧ ಕ್ರಮ ಜರುಗಿಸುವಂತೆ ಮಾಡಲಾಗುವುದು ಬೀದರ ಜಿಲ್ಲೆಯಲ್ಲಿರು 186 ಪದವಿ ಪೂರ್ವ ಕಾಲೇಜುಗಳಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕೆಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಶ್ರೀ ಧರ್ ಮಾತನಾಡಿ ಮಿಷನ್ ಇಂದ್ರ ಧನುಷ್ ಯೋಜನೆ ಉದ್ದೇಶ ಮಕ್ಕಳ ಪಾಲನೆ ಮತ್ತು ಪೋಷಣೆ ಮಾಡುವದಾಗಿದೆ. ಹಲವಾರು ಕಾಯ್ದೆ ಕಾನೂನುಗಳು ಜಾರಿಗೆ ಬಂದರು ಇನ್ನು ಅಫರಾಧಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ನೈತಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಶಾಲೆಗಳಲ್ಲಿ ಮಾತ್ರವಲ್ಲದೆ ಮನೆಗಳಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಮಾನವೀಯ ಮೌಲ್ಯಗಳ ಕುರಿತು ಅವರಿಗೆ ತಿಳಿ ಹೇಳಬೇಕೆಂದು ಹೇಳಿದರು.
ಪ್ರಾದೇಶಿಕ ಸಂಯೋಜಕರು. ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ. ಜಿಲ್ಲಾಧಿಕಾರಿಗಳ ಕಛೇರಿ ಕೊಪ್ಪಳದ ಡಾ.ಕೆ. ರಾಘವೇಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ ಮಕ್ಕಳ ಹಕ್ಕುಗಳ ಕುರಿತು ಎಲ್ಲರಿಗೂ ಸಂಪೂರ್ಣ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಸಿಂಧು ಎಚ್.ಎಸ್. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಂಗೀತಾ ಪಾಟೀಲ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅವಿನಾಶ್, ಶಿಕ್ಷಣಾಧಿಕಾರಿ ಗುಂಡಪ್ಪ. ಶಾರದಾ ಕಲ್ಮಲಕರ್. ಧನ ಲಕ್ಷ್ಮೀ ಪಾಟೀಲ, ಗೌರಿ ಶಂಕರ್ ಪರತಾಪೂರ ಸೇರಿದಂತೆ ವಿವಿಧ ಶಾಲಾ- ಕಾಲೇಜುಗಳು ಹಾಗೂ ವಸತಿ ಶಾಲೆ ಮತ್ತು ನಿಲಯಗಳ ಪ್ರಾಂಶುಪಾಲರು. ವಾರ್ಡನಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest Indian news

Popular Stories