ಹನೂರು: ಕಲುಷಿತ ಆಹಾರ, ನೀರು ಸೇವಿಸಿ 8 ಮಂದಿ ಅಸ್ವಸ್ಥ

ಚಾಮರಾಜನಗರ, ಮೇ, 06: ಕಲುಷಿತ ಆಹಾರ ಹಾಗೂ ನೀರು ಸೇವನೆ ಮಾಡಿ 8 ಮಂದಿ ಅಸ್ವಸ್ಥಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಹಲಗಾಪುರ ಗ್ರಾಮದಲ್ಲಿ ಸೋಮವಾರ (ಮೇ 06) ನಡೆದಿದೆ.

ವಾಂತಿ, ಭೇದಿಯಾಗಿ 8 ಮಂದಿ ಅಸ್ವಸ್ಥರಾಗಿದ್ದು, ಬಂಡಳ್ಳಿ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲಗಾಪುರದಲ್ಲಿ‌ ನಡೆದ ಆರಾಧನೆ ಮಹೋತ್ಸವದಲ್ಲಿ ಆಹಾರ ಸೇವಿಸಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಅಗತ್ಯ ಔಷಧ ವಿತರಣೆ ಮಾಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಆದರೆ, ಗ್ರಾಮಸ್ತರು ಕಲುಷಿತ ನೀರು ಸೇವಿಸಿ ಈ ಘಟನೆ ಆಗಿದೆ ಎಂದು ಆರೋಪಿಸಿದ್ದು, ಅಶುದ್ಧ ನೀರನ್ನು ಪೂರೈಕೆ ಮಾಡುತ್ತಿದ್ದಾರೆ. ಗ್ರಾಮಕ್ಕೆ ಸರಬರಾಜಾಗುವ ಕುಡಿಯುವ ನೀರನ್ನು ಪರೀಕ್ಷೆ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Latest Indian news

Popular Stories