ಚಿಕ್ಕಮಗಳೂರು:ಹೆಲ್ಮೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪೋಲಿಸ್ ಠಾಣೆಯಲ್ಲಿ ವಕೀಲ ಮತ್ತು ಪೋಲಿಸರ ನಡುವೆ ವಾಗ್ವಾದ ನಡೆದಿತ್ತು.ನಂತರ ಪೋಲಿಸರು ವಕೀಲ ಪ್ರೀತಮ್ ಎನ್ನುವವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದರು.ಆಸ್ಪತ್ರೆಯಲ್ಲಿ ವಕೀಲ ಪ್ರೀತಮ್ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಭೇಟಿಯಾಗಿ ಚಿಕ್ಕಮಗಳೂರಿನ ಡಿವೈ ಎಸ್ ಪಿ ಹೇಳಿಕೆ ಪಡೆದುಕೊಂಡ ಬಳಿಕ ಅಮಾನತು ಕ್ರಮ ಜರುಗಿಸಲಾಗಿದೆ.
“ಹಲ್ಲೆ ನಡೆಸಿರುವ ಪೊಲೀಸ್ ಇನ್ಸ್ ಪೆಕ್ಟರ್ (PSI), ಒಬ್ಬ ಎಎಸ್ ಐ, ಒಬ್ಬ ಹೆಡ್ ಕಾನ್ ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ.ಬಾರ್ ಕೌನ್ಸಿಲ್ ಸದಸ್ಯರೊಂದಿಗೆ ಮಾತುಕತೆ ನಡೆದಿದ್ದು ಅವರು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ ಎಂದು ಎಸ್ ಪಿ ಆಮ್ಟೆ ಹೇಳಿದರು.
ಅವರ ವಿರುದ್ಧ ಐಪಿಸಿ 307, 324, 504 ಮತ್ತು 506 ಸೆಕ್ಷನ್ ಗಳ ಅಡಿ ಎಫ್ ಐ ಆರ್ ದಾಖಲಿಸಿಕೊಂಡು ಅಮಾನತು ಮಾಡಲಾಗಿದೆ.