ದೆಹಲಿಯಲ್ಲಿ ಮತ್ತೊಂದು ಬೀಭತ್ಸ ಕೃತ್ಯ: ವ್ಯಕ್ತಿಯ ಹತ್ಯೆ ಮಾಡಿ ಕತ್ತರಿಸಿ ಫ್ರಿಡ್ಜ್’ನಲ್ಲಿಟ್ಟ ಮಹಿಳೆ ಮತ್ತು ಮಗ!

ನವದೆಹಲಿ: ದೆಹಲಿಯಲ್ಲಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆ ಮತ್ತೊಂದು ಬೀಭತ್ಸ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬನನ್ನು ತುಂಡು ತಂಡಾಗಿ ಕತ್ತರಿಸಿ ನಂತರ ಅವುಗಳನ್ನು ಫ್ರಿಡ್ಜ್ ನಲ್ಲಿಟ್ಟಿದ್ದ ಮಹಿಳೆ ಹಾಗೂ ಆಕೆಯ ಮಗನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ತ್ರಿಲೋಕ್ ಪುರಿಯಲ್ಲಿ ಈ ಘಟನೆ ನಡೆದಿದ್ದು, ತಾಯಿಯ ಸಹಾಯದಿಂದ ಮಗನೇ ತಂದೆಯನ್ನು ತುಂಡು ತಂಡಾಗಿ ಕತ್ತರಿಸಿ, ರೆಫ್ರಿಜರೇಟರ್ ನಲ್ಲಿಟ್ಟಿದ್ದಾನೆ. ನಂತರ ಅವುಗಳನ್ನು ಪಾಂಡವ್ ನಗರ ಮತ್ತು ಪೂರ್ವ ದೆಹಲಿಯ ಸುತ್ತಮುತ್ತ ಎಸೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಾಂದ್ ಸಿನಿಮಾ ಎದುರು ಮಧ್ಯ ರಾತ್ರಿಯಲ್ಲಿ ಮೃತದೇಹಗಳನ್ನು ಎಸೆಯುತ್ತಿದ್ದ ದೃಶ್ಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿ ದೆಹಲಿ ಪೊಲೀಸರ ಕಸ್ಟಡಿಯಲ್ಲಿದ್ದು, ಇಂದು ಆತನಿಗೆ ಪಾಲಿಗ್ರಾಪ್ ಪರೀಕ್ಷೆ ಮಾಡಲಾಗುತ್ತಿದೆ. 

Latest Indian news

Popular Stories