ಬೆಳ್ತಂಗಡಿ: ಭೀಕರ ಅಪಘಾತ – ಒರ್ವ ಮೃತ್ಯು

ಬೆಳ್ತಂಗಡಿ, ನವೆಂಬರ್ 24: ಧರ್ಮಸ್ಥಳದ ಕುದುರೆಯ ಎಂಬಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಮೃತಪಟ್ಟು ಏಳು ಜನರು ಗಾಯಗೊಂಡಿದ್ದಾರೆ.

ಮೃತರನ್ನು ಮಂಡ್ಯದ ಚೆನ್ನಸಂದಾರ್ ನಿವಾಸಿ ಮಹದೇವ (63) ಎಂದು ಗುರುತಿಸಲಾಗಿದೆ.

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಮಂಡ್ಯದ 10 ಮಂದಿ ಕುಟುಂಬ ಕುದುರೆಯ ಬಳಿ ರಸ್ತೆಬದಿಯಲ್ಲಿ ಎಸ್‌ಯುವಿ ನಿಲ್ಲಿಸಿ ಸಮೀಪದ ಅಂಗಡಿಗೆ ತೆರಳಲು ವಾಹನದಿಂದ ಇಳಿಯುತ್ತಿದ್ದರು. ಧರ್ಮಸ್ಥಳದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎಸ್‌ಯುವಿ ಹಾಗೂ ಪಕ್ಕದಲ್ಲಿ ನಿಂತಿದ್ದ ಜನರಿಗೆ ಢಿಕ್ಕಿ ಹೊಡೆದಿದೆ.

ಐವರು ಮಹಿಳೆಯರು, ಓರ್ವ ಪುರುಷ ಮತ್ತು ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Latest Indian news

Popular Stories