ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಖಾಸಗಿ ದೂರು ಸಂಬ0ಧ ಎಫ್ ಐ ಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ 9 ಮಂದಿ ವಿರುದ್ಧದ ದಾಖಲಾಗಿದ್ದ ಖಾಸಗಿ ದೂರಿನ ಸಂಬAದ ಎಫ್ ಐ ಆರ್ ದಾಖಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ವಾದ ಆಲಿಸಿ ಆದೇಶ ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶ ಜಯಂತ್ ಕುಮಾರ್ ಅವರ ನ್ಯಾಯಪೀಠವು, ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಈ ಮೊದಲು ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಅಬ್ರಾಹಂ ಸಲ್ಲಿಸಿದ್ದ ಅರ್ಜಿಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು. ಈ ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ಖಾಸಗಿ ದೂರನ್ನು ವಜಾಗೊಳಿಸಿದೆ. ಇದರಿಂದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.