ಬೀದರ್: ಸಿಡಿಲು ಬಡಿದು ವ್ಯಕ್ತಿಯ ಮೃತ್ಯು

ಔರಾದ್ : ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಲಿ (ಜೆ) ತಾಂಡದಲ್ಲಿ ಶುಕ್ರವಾರ ಸಾಯಂಕಾಲ ಸಂಭವಿಸಿದೆ.

ಔರಾದ್ ತಾಲೂಕಿನ ಚಿಕ್ಲಿ (ಜೆ) ತಾಂಡದ ನಿವಾಸಿ ಭೀಮಲಾ ಹೇಮಲು (60) ಮೃತಪಟ್ಟವರು.

ಹೊಲದಲ್ಲಿ ಕೆಲಸ ಮಾಡಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಹಸೀಲ್ದಾರ ನಾಗಯ್ಯ ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Latest Indian news

Popular Stories