ಬೆಂಗಳೂರು : ನಿದ್ರೆಯ ಮಂಪರ ನಲ್ಲಿದ್ದ ಕಾರಣ ನಿಯಂತ್ರಣ ತಪ್ಪಿದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದು ಪರಿಣಾಮ ದಗ ದಗನೇ ಉರಿದು
ಎರಡು ವರ್ಷದ ಪುಟ್ಟ ಮಗು ಸೇರಿದಂತೆ ಇಬ್ಬರು ಕಾರಿನಲ್ಲಿದ್ದವರು ಸಜೀವ ದಹನ ಆಗಿದ್ದಾರೆ.ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ.ಬಳಿಕ ಮೋರಿಯ ಗೋಡೆಗೆ ಗುದ್ದಿದೆ .ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ.