ಮುಂಬೈ :ಅರಬ್ಬಿ ಸಮುದ್ರದ ನಡು ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಉಂಟಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಿದೆ.ಇದು
ಭಾರತಕ್ಕೆ ಅಪ್ಪಲಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಒಂದು ವೇಳೆ ವಿರುದ್ದ ದಿಕ್ಕಿನಲ್ಲಿ ಸಾಗಿದರೆ ಮುಂಬೈ, ಗುಜರಾತ್ ಸೇರಿದಂತೆ ಪಶ್ಚಿಮ ಕರಾವಳಿಗೆ ಭಾರಿ ಹಾನಿಯುಂಟು ಮಾಡುವ ಬಗ
ಸಾಧ್ಯವಿದೆ ಎನ್ನಲಾಗುತ್ತಿದೆ
ಇಂದು ಶನಿವಾರ ಚಂಡಮಾರುತದ ರೂಪ ತಾಳಿ ತೀವ್ರಗೊಳ್ಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಈ ವರ್ಷ ಅರಬ್ಬಿ ಸಮುದ್ರದಲ್ಲಿ ಇದು 2ನೇ ಚಂಡಮಾರುತವಾಗಿದೆ. ಸದ್ಯ ಒಮಾನ್ ಮತ್ತು ಪಕ್ಕದ ಯೆಮೆನ್ನ ದಕ್ಷಿಣ ಕರಾವಳಿಯ ಕಡೆಗೆ ಇದು ಚಲಿಸುತ್ತದೆ. ಆದರೆ ಭಾರತದ ಗುಜರಾತ್ ಕರಾವಳಿಯಲ್ಲಿ ಸಾಕಷ್ಟು ವಿನಾಶ ಉಂಟು ಮಾಡಿದ ಬಿಪೊರ್ಜೊಯ್ ಚಂಡಮಾರುತದ ರೀತಿ ಈ ಚಂಡಮಾರುತ ಕೂಡ ಪಥ ಬದಲಿಸಿ ಸಾಗಬಹುದು.