ಬೆಂಗಳೂರು,ಜ.19:- ಪತ್ನಿಯೊಂದಿಗೆ ಜಗಳವಾಡಿ ಪತಿ ನೇಣಿಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಬಸವೇಶ್ವರನಗರದ ಮಂಜುನಾಥ ನಗರದಲ್ಲಿ ನಡೆದಿದೆ.
28 ವರ್ಷದ ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನಲ್ಲಿದ್ದ ತನ್ನ ಪತ್ನಿಯೊಂದಿಗೆ ಜಗಳವಾಡಿಕೊಂಡಿದ್ದ ಅನಿಲ್ ಕುಡಿದ ಅಮಲಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು.
ಈ ವೇಳೆ ಅನುಮಾನಗೊಂಡ ಅನಿಲ್ ಮನೆಯ ಅಕ್ಕ ಪಕ್ಕದವರು ಕಿಟಕಿ ಮೂಲಕ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಅನಿಲ್ ಅವರನ್ನು ಸಮಾಧಾನ ಪಡಿಸಲು ಯತ್ನಿಸಿದ್ದರು. ಆದರೂ, ಸಮಾಧಾನಗೊಳ್ಳದ ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆದ್ರೆ ನೆರೆಮನೆಯವರು ಎμÉ್ಟೀ ಕಿರುಚಿಕೊಂಡರು, ಬೇಡವೆಂದರೂ ಯಾರ ಮಾತು ಕೇಳದೆ ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ದೃಶ್ಯಗಳನ್ನು ನೆರೆಮನೆಯವರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ನೆರೆಮನೆಯವರು ಬಾಗಿಲು ಮುರಿದು ಒಳಬರುವಷ್ಟರಲ್ಲಿ ಅನಿಲ್ನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಬಸವೇಶ್ವರನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.