ನವದೆಹಲಿ (ಅ.07): ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆ ನಾಶವಾಗಲಿದೆ ಎಂದು ನಾನು ಹೇಳಿದ್ದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತೊಮ್ಮೆ ರಾಜ್ಯದ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕ ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಜಾರಿಕೊಳ್ಳಲಿದೆ ಎಂದು ನಾನು ಈ ಹಿಂದೆ ಹೇಳಿದ್ದೆ.ಈ ಹಿಂದೆ ಈ ವರ್ಷ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಇದೀಗ ಹೊಸ ಜಿಲ್ಲೆಗಳಲ್ಲಿ ಕುರ್ಚಿ ಮತ್ತು ಟೇಬಲ್ ಖರೀದಿಸಲು ಹಣವಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಸಚಿವರೊಬ್ಬರು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಎಲ್ಲಾ ಹಣ ಎಲ್ಲಿ ಹೋಯಿತು ಎಂಬುದನ್ನು ಹೇಳುತ್ತಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ರಾಹುಲ್ ಅವರು ಹೇಳಿರುವ ಗ್ಯಾರಂಟಿಗಳ ನಿಜವಾದ ಅರ್ಥ ಇದೇ ಆಗಿದೆ. ಇದು ಮುಂದಿನ ದಿನಗಳಲ್ಲಿ ರಾಜ್ಯದ ಆರ್ಥಿಕತೆಯನ್ನು ನಾಶ ಮಾಡಲಿದೆ ಎಂದು ಅವರು ಹೇಳಿದ್ದಾರೆ