ಬೀದರ ಮೇ.25 (ಕರ್ನಾಟಕ ವಾರ್ತೆ): ಕೋವಿಡ್-19ರ 2ನೇ ಅಲೆಯ ನಿಮಿತ್ಯವಾಗಿ ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಒಂದುಬಾರಿ ರೂ.3000/- ನ್ನು ಪರಿಹಾರ ಧನ ಘೋಷಿಸಲಾಗಿರುತ್ತದೆ. ಈ ಅನುದಾನದ ಮೊತ್ತವನ್ನು ನೇರವಾಗಿ ಕಾರ್ಮಿಕರ ಆಧಾರ್ ಲಿಂಕ್ ಬ್ಯಾಂಕ್ ಖಾತೆಗೆ (ಡಿಬಿಟಿ) ವರ್ಗಾಯಿಸಲಾಗುತ್ತದೆ. ಅನ್ಲೈನ್ದಲ್ಲಿ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ 155214 ಗೆ ಕರೆ ಮಾಡಲು ಬೀದರ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಧ್ಯವರ್ತಿಗಳಿಗೆ ಹಣ ನೀಡಿದಲ್ಲಿ ಅದಕ್ಕೆ ನೀವೇ ಜವಾಬ್ದಾರರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.