ಕಾರವಾರ : ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದರು.
ಕಾರವಾರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಶಿಗ್ಗಾವಿ, ಸಂಡೂರು, ಚೆನ್ನಪಟ್ಟಣ ಕ್ಷೇತ್ರಗಳ
ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದರು.
ನಮ್ಮ ಅಭ್ಯರ್ಥಿಗಳು ಗೆಲ್ಲುವುದಕ್ಕೆ ಎಲ್ಲಾ ರೀತಿಯ ಸಹಾಯ ಸಹಕಾರ ಮಾಡುತ್ತೇವೆ. ಪಕ್ಷದ ಆದೇಶದ ಪ್ರಕಾರ ವರಿಷ್ಠರು ಹೇಳಿದ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡುತ್ತೇವೆ ಎಂದರು.
ಇದುವರೆಗೂ ಎಲ್ಲಿಗೆ ,ಯಾವ ಸಚಿವರು ಹೋಗಬೇಕು ಅಂತಾ ಹೇಳಿಲ್ಲ. ಅಭ್ಯರ್ಥಿಗಳ ಆಯ್ಕೆ ಬಳಿಕ ಪ್ರಚಾರದ ಬಗ್ಗೆ ಸೂಚನೆ ಬರಲಿದೆ ಎಂದರು.
……