ಮಂಗಳೂರು: ಮಾಡೆಲ್ ಪ್ರೇಕ್ಷಾ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಹೊತ್ತಿದ್ದ ಯುವಕ ಆತ್ಮಹತ್ಯೆ

ಮಂಗಳೂರು, ಮೇ 11: ಎರಡು ವರ್ಷಗಳ ಹಿಂದೆ ಕುಂಪಲದ ಆಶ್ರಯ ಕಾಲೋನಿಯಲ್ಲಿ ಮಾಡೆಲ್ ಪ್ರೇಕ್ಷಾ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಹೊತ್ತ ಯುವಕನೋರ್ವ ಮೇ 10 ಬುಧವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತರನ್ನು ಕುತ್ತಾರು ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ (20) ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ 11 ಗಂಟೆಗೆ ತನ್ನ ಮನೆಯ ಹಿಂಭಾಗದಲ್ಲಿರುವ ಚಿಕ್ಕಮ್ಮನ ಸಿಟ್‌ಔಟ್‌ನಲ್ಲಿ ಕಬ್ಬಿಣದ ಕೊಕ್ಕೆಗೆ ನೇಣು ಬಿಗಿದುಕೊಂಡಿದ್ದಾನೆ. ಯತಿರಾಜ್ ಚಿಕ್ಕಪ್ಪ ಹುಡುಕಿಕೊಂಡು ಹೋದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

Latest Indian news

Popular Stories