ದ.ಕ | ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಮೃತ್ಯು

ಮಂಗಳೂರು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.
ಮುಳ್ಳಿಕಾರ್ ಪಟ್ಟೋಡಿ ನಿವಾಸಿ ಜಗದೀಶ್ ಎಂಬವರ ಒಂದೂವರೆ ವರ್ಷದ ಮಗು ಪ್ರಣೀತ್ ಮೃತಪಟ್ಟ ಮಗು.

ಶುಕ್ರವಾರ ಸಂಜೆ ಪ್ರಣೀತ್ ಮನೆಯಂಗಳದಲ್ಲಿ ಆಟವಾಡುತ್ತಿದ್ದ. ಈ ವೇಳೆ ಗಂಡ ಹೆಂಡತಿ ಮನೆಯೊಳಗಿದ್ದರು. ಕೆಲ ಹೊತ್ತಿನ ಬಳಿಕ ಹೊರಬಂದು ನೋಡಿದಾಗ ಮಗು ಅಂಗಳದಲ್ಲಿ ಇರಲಿಲ್ಲ.

ಸಾಮಾನ್ಯವಾಗಿ ತಾಯಿಯೊಂದಿಗೆ ಮಗು ತೋಟಕ್ಕೆ ಹೋಗುತ್ತಿದ್ದು, ಈ ಹಿನ್ನೆಲೆಯಲ್ಲಿ ತೋಟಕ್ಕೆ ಹೋಗಿ ನೋಡಿದಾಗ ಮಗುವಿನ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ.
ಜಗದೀಶ್ ಅವರ ಪತ್ನಿ ಪ್ರತಿ ದಿನ ತೋಟಕ್ಕೆ ನೀರು ಬಿಡಲೆಂದು ಸಂಗ್ರಹಿಸಿರುವ ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದು ಆ ಸಮಯ ಪುತ್ರ ಪ್ರಣಿತ್ ಕುಮಾರ್‌ನನ್ನು ಕೆರೆಯ ಬಳಿ ಕರೆದುಕೊಂಡು ಹೋಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರಣಿತ್‌ಗೆ ಕೆರೆಯ ಬಳಿ ಹೋಗುವ ಅಭ್ಯಾಸವಾಗಿದೆ ಎಂದು ಹೇಳಲಾಗುತ್ತದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories